Saturday, December 20, 2008

ಕೃಷಿ ಭೂಮಿ ಮಾರಾಟಕ್ಕಿದೆ!!!

ಕೃಷಿಯಲ್ಲಿ ಏನೇನೂ ಸುಖವಿಲ್ಲ ಎಂಬ ಮಾತು ಎಲ್ಲಿ ಹೋದರೂ ಬಿಡದು. ಕೃಷಿಕರನ್ನು ಕಾಡುವಷ್ಟು ಸಮಸ್ಯೆ ಬೇರೆ ಯಾರನ್ನೂ ಕಾಡದು...ಹಾಗಾಗಿ ಇದ್ದ ಜಾಗವನ್ನು ಮಾರಾಟ ಮಾಡಿ ನಗರಕ್ಕೆ ಹೋಗೋಣ ಎನ್ನುವುದು ಹಳ್ಳಿಗರದ್ದೂ ಯೋಚನೆ...ಇತ್ತೀಚೆಗೆ ಪಿರಿಯಪಟ್ಟಣ ಸಮೀಪ ಹೋಗುತ್ತಿದ್ದಾಗ ಹಸಿರು ಭೂಮಿಯೊಂದರಲ್ಲಿ ಕೆಂಪು ಅಕ್ಷರದಲ್ಲಿ ಹಾಕಿದ್ದ ಈ ಫಲಕ ಯಾಕೋ ಬಹಳ ನೋವು ತಂದಿತು.